ಬೆಂಗಳೂರು: ನೆದರ್ಲ್ಯಾಂಡ್ನ ಅಂತರರಾಷ್ಟ್ರೀಯ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀ ಲಿಯನಾರ್ಡೋ ಬ್ರಾಂಟ್ ಅವರು ಇಂದು ಕರ್ನಾಟಕ ವಿಧಾನ ಪರಿಷತ್ನ ಸಭಾಪತಿ ಶ್ರೀ ಸಲೀಂ ಅಹ್ಮದ್ ಅವರನ್ನು ವಿಧಾನಸೌಧದ ಕಚೇರಿಯಲ್ಲಿ ಭೇಟಿ ಮಾಡಿ ಸಮಾಲೋಚನೆ ನಡೆಸಿದರು.
ಈ ಸಂದರ್ಭದಲ್ಲಿ ನ್ಯಾಯಾಂಗ ವ್ಯವಸ್ಥೆ, ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಸಂವಿಧಾನಾತ್ಮಕ ಸಂಸ್ಥೆಗಳ ಕಾರ್ಯವೈಖರಿ ಕುರಿತು ಇಬ್ಬರೂ ವಿಚಾರ ವಿನಿಮಯ ನಡೆಸಿದರು.

ಇದೇ ವೇಳೆ ಶಾಸಕಾಂಗ ಮತ್ತು ನ್ಯಾಯಾಂಗದ ನಡುವಿನ ಪರಸ್ಪರ ಸಹಕಾರ, ಸಂವಿಧಾನಾತ್ಮಕ ಹೊಣೆಗಾರಿಕೆ ಸೇರಿದಂತೆ ಹಲವು ಪ್ರಮುಖ ವಿಷಯಗಳ ಕುರಿತು ಚರ್ಚೆ ನಡೆಯಿತು.
